ಹೋಗುವೆಯಂತೆ ಅವಸರವೇಕೆ ಎನ್ನದಿರಿ

Bye Bye
ಬೆಂಗಳೂರಿಂದಾಚೆ ಹೋಗುವುದು ಮೂರೇ ದಿನಗಳ ಮಟ್ಟಿಗೆ…
ಬಂದ ಮೇಲೆ ಸುಧಾರಿಸಿಕೊಳ್ಳಲು ಅಂತ ಒಂದು ದಿನ…
ಎಲ್ಲಾ ಸೇರಿ ನಾಲ್ಕು ದಿನದ ರಜೆ… ಅಷ್ಟು ದಿನ ಬ್ಲಾಗ್ ಕಡೆ ಬರಲಾಗದು
ಹಿಂತಿರುಗುವ ಹೊತ್ತಿಗೆ ಒಂದಷ್ಟು ಚೆಂದದ ಚಿತ್ರಗಳನ್ನು ತರುತ್ತೇನೆ. ಪ್ರಾಮಿಸ್…
ಬರಲಾ….

ಮನದಂಗಳದ ಮಲ್ಲಿಗೆ ಬಳ್ಳಿ

Hoo Preethi
ಬದುಕೆಂಬ ಭಾವ ಲೋಕದ ಮಹಾನ್ ಅಚ್ಚರಿಯಿವನು. ಇಂಥವ ಇನ್ನೊಬ್ಬನಿರಲು ಸಾಧ್ಯವೇ ಇಲ್ಲ ಎಂಬ ನಂಬಿಕೆ ಹುಟ್ಟಿಸಿದವನು. ವರ್ಷಗಳಿಂದ ಕಾಡುತ್ತಿದ್ದ ಒಗಟುಗಳಿಗೆ ಉತ್ತರವೆನಿಸುತ್ತಲೇ ಎಂಥ ಒರಟು ಒಗಟಿವನೆಂಬ ಪ್ರಶ್ನೆ ಹುಟ್ಟಿಸಬಲ್ಲ ತಾಕತ್ತಿನವನು. ಉತ್ತರ ಸಿಗದೇ ತಡಕಾಡುತ್ತಿದ್ದರೆ ಮೀಸೆಯಂಚಿನಲಿ ನಗುತ್ತ ಮಡಿಲಿಗೇ ಬಂದು ಪ್ರಶ್ನೆ ಮರೆಸುವ. ಘಟ್ಟದ ಮೇಲಿಂದ ಇಳಿದು ಬಂದು ಅದಾವ ಮಾಯೆಯಲ್ಲೋ ಬಯಲಿನ ಹುಡುಗಿಯನ್ನು ಹೊತ್ತೊಯ್ದ ಹುಡುಗ. ಉತ್ತರದಲ್ಲೇ ಪ್ರಶ್ನೆ ಹುಟ್ಟಿಸಿ ಕಣ್ಣು ಮಿಟುಕಿಸಬಲ್ಲ ಹುಡುಗಿಯನ್ನು ಮರುಳಾಗಿಸಿ ಸುಮ್ಮನೇ ಮೌನದ ಜೋಕಾಲಿಯಲ್ಲಿಟ್ಟು ತೂಗಿದ ಮಾಧವ.

ಲೋಕ ವಿನಾಶವಾದೀತೆಂಬುದು ಸ್ಪಷ್ಟವಿದ್ದರೂ ಗಂಗೆಯ ಬಿಟ್ಟ ಮಹದೇವನೋ, ವಿನಾಶ ತಡೆಯಲು ಆಪೋಶನಗೈದ ಭಗೀರಥನೋ ಎಂಬ ಭ್ರಮೆ ಹುಟ್ಟಿಸಬಲ್ಲ ಧೀರ. ತನ್ನ ಹರಿವಿನುದ್ದಕ್ಕೂ ಹಸಿರ ಸೆರಗು ಮೂಡಿಸಿದ ಗಂಗೆಯೂ ಇವನೇನಾ ? ಇವನ ಮೌನ ಸಹಿಸಿಕೊಳ್ಳುವ ಶಕ್ತಿಯಿಲ್ಲ; ಮೌನದ ಕೋಟೆ ಕೆಡಹುವ ಯುಕ್ತಿಯಿಲ್ಲ. ಪ್ರಿಯನಾ, ಗಂಡನಾ, ಒಲಿದು ಬಂದ ದೇವನಾ, ಎಲ್ಲವೂ ಮೇಳೈಸಿದ ಗೆಳೆಯನಾ… ಉಹುಂ.. ಅರ್ಥಗಳ ಸೂತ್ರಕ್ಕೆ ನಿಲುಕದವನಿವನು. ಹಿಂದೆ ಮುಂದಿನವುಗಳಲಿ ನಂಬಿಕೆಯಿಲ್ಲದಾಗಲೂ ಜನ್ಮಾಂತರದ ಸಾಥಿ ಎನಿಸುತ್ತ ಒಮ್ಮೊಮ್ಮೆ ಮಗುವಿನಂತೆ, ಇನ್ನೊಮ್ಮೆ ನಗುವಿನಂತೆ ಆವರಿಸುವ.. ಸಿಟ್ಟು, ಸೆಡವು, ಮುನಿಸು, ಕೊರಗು, ಬೆರಗು ಎಲ್ಲ ಮುಖದ ಮೇಲಿನ ಮೊಡವೆಯಷ್ಟು ಸಹಜ. ಅಷ್ಟೇ ಹತ್ತಿರಿರುವ ಎಂದು ಕೈ ಚಾಚಿದರೆ ಎಲ್ಲೋ ಬಾನೆತ್ತರದ ನಕ್ಷತ್ರ.

ಬೇಕಾದ್ದನ್ನು ಪಡೆದೇ ತೀರುವ ಛಲದ ಬಳ್ಳಿ ಹುಟ್ಟಿದ್ದು ಇವನೆದೆಯಲ್ಲೇ; ಬೇಡಾದ್ದನ್ನು ನಿರಾಕರಿಸುವ ಜಾಣ್ಮೆ ಕೂಡ. ಜೀವವಿತ್ತ ತನ್ನ ಹಳ್ಳಿಯ ಅಷ್ಟೂ ವಿಸ್ಮಯಗಳು, ನಿರಾಡಂಬರತೆಯನ್ನು ತನ್ನಲ್ಲಿಟ್ಟುಕೊಂಡೇ ಜೀವನವಿತ್ತ ನಗರದ ನಾವೀನ್ಯತೆಯನ್ನು, ಸಾವಿರ ಝಲಕ್ ಗಳನ್ನು ದಿವ್ಯ ನಿರಾಳತೆಯ ಜತೆಗೇ ಮುಟಿಗೆಯಲ್ಲಿಟ್ಟುಕೊಂಡವ.

ಸದ್ದಿಲ್ಲದೇ ಸುಗ್ಗಿಯಲ್ಲರಳುವ ಮೊಗ್ಗಿನಂತೆ ನನ್ನಂಗಳಕೆ ಬಂದು ಪೂರ ಕಲರವದ ಚಪ್ಪರ ಬೆಳೆದವನು. ನಕ್ಷತ್ರಗಳ ತೋರಣ ಕಟ್ಟಿ ಚಂದಿರನ ದೀಪವಾಗಿಸಿದವನು. ಮಿಂಚಂತೆ ಬಂದು ನಕ್ಷತ್ರದ ಐಸಿರಿಯ ಮಡಿಲಲಿಟ್ಟವನು. ನಾ ಕಾಣದೇ ಇದ್ದ ಬದುಕಿನೆಳೆಗಳ ನಿರ್ಭಿಡೆಯಿಂದ ನನ್ನೆದುರು ಹರಡಿ ಜುಮ್ಮೆನಿಸಿದವನು. ನನಗೆ ನೀನೇ ದಿಕ್ಕು, ನೀನೇ ಗಮ್ಯವೆಂದಿದ್ದು ಕೇಳಿಸಲೇ ಇಲ್ಲವೇನೋ ಎಂಬಂತೆ ತನ್ನ ಪಾಡಿಗೆ ತಾನು ನಡೆವ ಮುಸಾಫಿರ್ ಇವನು. ಕಾದು ಕಾದು ಸಾಕಾಗಿ ಇನ್ನು ಈತ ಬರಲೊಲ್ಲವೆಂದು ನಿದ್ರಿಸಿದರೆ ಮಧ್ಯರಾತ್ರಿ ಕನಸಿನಂತೆ ಬಂದು ಎದೆಯ ಕದ ತಟ್ಟುವವನು. ವಿರಹದೆಲ್ಲ ಮುನಿಸನ್ನು ಕ್ಷಣ ಮಾತ್ರದಲ್ಲಿ ತುಟಿಕಚ್ಚಿ ಕರಗಿಸಿ ಬಿಡುವವನು. ನಿನ್ನೆ ರಾತ್ರಿ ನೋಯಿಸಿದ್ದು ನೆನಪೇ ಇಲ್ಲವೆಂಬ ತೆರದಲಿ ಮತ್ತೆ ಆವರಿಸಿ ಒಡಲಲ್ಲಿ ಒಲುಮೆಯ ಅಮೃತಬಳ್ಳಿ ಹಬ್ಬಿಸುವವನು. ಭಾರ ಬದುಕಿನ ದೂರ ದಾರಿಯ ಹಗುರಾಗಿಸಿ ನಮ್ಮ ಪ್ರೀತಿ ಪೊರೆಯುವವನು…

ಒಂದೇ ಒಂದು ಹನಿ

ನಿನ್ನಾಣೆ ಗೆಳತೀ
ನಿನ್ನ ಸ್ಪರ್ಷದ
ಕರೆಂಟ್ ಬೇಕಾಗಿದೆ…
ಆಣೆ ಭಾಷೆ ಬೇಕಿಲ್ಲ
ಗೆಳೆಯಾ ಕಣ್ಣು
ನೂರಾಸೆ ಹೇಳಿದೆ…
*****

ಚಿತ್ರೋತ್ಸವದ ಆಫ್ಟರ್ ಇಫೆಕ್ಟ್

ಪರಿಸರದೆಡೆಗೆ ಸಾಂಗತ್ಯದ ನಡಿಗೆ

ಪರಿಸರದೆಡೆಗೆ ಸಾಂಗತ್ಯದ ನಡಿಗೆ

ಕುಪ್ಪಳ್ಳಿಯ ತಣ್ಣನೆ ಹವೆಯಲ್ಲಿ ಕಾಲಿಟ್ಟ ನಮಗೆ ಸಂಭ್ರಮದ ಚಿತ್ರೋತ್ಸವದ ಆರಂಭಕ್ಕೇ ಸಿಕ್ಕಿದ್ದು ಬೇಂದ್ರೆ ತಾತನ ಕುರಿತಾದ ಸಾಕ್ಷ್ಯ ಚಿತ್ರ. ಕೆಲವು ಕಡೆಯಂತೂ ಅವರೇ ಎದ್ದು ಬಂದಂತೆ ಭಾಸ.

ನಂತರದ್ದು “ಕಾರಂತಜ್ಜನಿಗೊಂದು ಪತ್ರ” ಸಚ್ಚಿದಾನಂದ ಹೆಗಡೆಯವರ ಕಥೆ, ಜೋಗಿಯವರ ಚಿತ್ರಕಥೆಯಿರುವ ಈ ಸಿನೆಮಾ ನೋಡಿದ್ದು ಕಥೆ ಆಧಾರಿತ ಚಿತ್ರಗಳ ವಿಭಾಗದಲ್ಲಿ. ಭಾರತಿ ಶಂಕರ್ ನಿದರ್ೇಶನ ಬಿಗುವಿಲ್ಲದೆ ಸಾಗಿದಂತೆಯೂ ಮೂವತ್ತು ನಿಮಿಷಗಳಲ್ಲಿ ಮುಗಿಸಬಹುದಾದ ಚಿತ್ರವನ್ನು ಗಂಟೆಗಟ್ಟಲೇ ತೋರಿಸಿದಂತೆಯೂ ನನಗನಿಸಿದ್ದು ಬಹುಶ: ಸೋಜಿಗವೇನಲ್ಲ. ಶಾನುಭೋಗರ ಮಗ ಅಷ್ಟು ಸಣ್ಣ ವಯಸಿನ ರಾಘು ಬಾಯಲ್ಲಿ ಆಡಿಸಿದ ಮಾತುಗಳು ವಯಸಿಗೆ ಮೀರಿದವೇನೋ ಅಂತಲೂ ಅನಿಸಿದ್ದು ಹೌದು. ಕಡಲ ಕೊರೆತದಂಥಾ ವಿಷಯವನ್ನು ನಿರಂತರ ತಲೆ ಕೊರೆವಷ್ಟು ಗಾಢವಾಗಿ ಚಿತ್ರಿಸುವಲ್ಲಿ ಸೋತಿದ್ದಾರೆ. ಕಡಲತೀರದ ಕಥೆಗೆ ಅಲ್ಲಿನದೇ ಭಾಷೆಯ ಟಚ್ ಕೊಟ್ಟಿದ್ದರೆ ಚಿತ್ರಕ್ಕೆ ಮೂವತ್ತು ಮಾರ್ಕು ಹೆಚ್ಚಿಗೆ ಕೊಡಬಹುದಿತ್ತು. ಮೀನುಗಾರ ಅಷ್ಟು ದೊಡ್ಡ ಅಲೆ ಬರುತ್ತೆ ಅಂತ ಹುಡುಗನಿಗೆ ಹೇಳುವಾಗ ತೆರೆಯ ಮೇಲೆ ಕಾಣುವ ಅಲೆ ತೀರಾ ಸಾಮಾನ್ಯ ಗಾತ್ರದ್ದು. ಇನ್ನುಳಿದಂತೆ ಶಾನುಭೋಗರ ಆಡಳಿತ ವ್ಯವಸ್ಥೆಯ ಅಡಿಯಲ್ಲಿರುವ ಊರಿನ ರಾಜಕೀಯಗಳು, ಅಧಿಕಾರಿಗಳ ಉಡಾಫೆ, ಊರಿಗೆ ಊರೇ ಅಳುತ್ತಿದ್ದಾಗಲೂ ನಿರಾಳವಾಗಿ ಕೂರಬಲ್ಲ ತಹಶೀಲ್ದಾರ, ಎಂದೋ ಊರು ಬಿಟ್ಟು ಹೋದ ಮಗನಿಗಾಗಿ ಇನ್ನೂ ಕಾಯುತ್ತಲೇ ಇರುವ ತಾತ, ಮುದ್ದಿನ ಹಸು ಕಪಿಲೆಯನ್ನು ಬಿಟ್ಟು ಹೋಗಲಾರದೆ ಅಳುವ ಶಾನುಭೋಗರ ತಾಯಿಯ ವೇದನೆ ಎಲ್ಲ ಸಹಜ ಸಹಜ.. ನನ್ನ ಮನ ತಟ್ಟಿದ್ದು ಸದಾನಂದ ಮೇಷ್ಟ್ರು ಮಕ್ಕಳನ್ನು ಆವರಿಸಿಕೊಳ್ಳುವ ಪರಿ. ನಾನು ಶಾಲೆಗೆ ಹೋಗುತ್ತಿದ್ದ ದಿನಗಳಲ್ಲಿ ಅಂಥದ್ದೇ ಅವಿನಾಭಾವ ಸಂಬಂಧ. ಒಂದನೇ ಕ್ಲಾಸಿನ ರುಕ್ಮಯ ಮಾಸ್ತರು, ಎರಡನೇ ಕ್ಲಾಸಿನ ರಮಾನಂದ ಮಾಸ್ತರು, ಪ್ರಮೀಳಾ ಟೀಚರು, ಸುಧಾ, ಶಶಿಕಲಾ ಟೀಚರುಗಳೆಲ್ಲರೂ ನನ್ನ ಮನದಂಗಳದಲ್ಲಿ ಸುಳಿದಾಡಿದ್ದರು. ಮನೆಗಿಂತ ಹೆಚ್ಚು ಹೊತ್ತು ಶಾಲೆಯಲ್ಲಿ ಕಳೆಯುತ್ತಿದ್ದ ನಮಗೆ ಟೀಚರುಗಳೆಂದರೆ ಎಲ್ಲರಿಗಿಂತ ಹೆಚ್ಚು ಶಕ್ತಿವಂತರೆಂಬ ಭಾವ. ಮೂರನೇ ಕ್ಲಾಸಿನಲ್ಲಿದ್ದಾಗ ಶಶಿಕಲಾ ಟೀಚರು ಉಟ್ಟ ಸೀರೆ ನನ್ನಮ್ಮನ ಬಳಿಯೂ ಇತ್ತೆಂಬ ಕಾರಣಕ್ಕೆ ಅದೆಷ್ಟು ಸಂಭ್ರಮವಿತ್ತು ನನಗೆ.. ಮನಸನ್ನು ಪೂರ್ತಿಯಾಗಿ ಬಾಲ್ಯದ ಕಡೆಗೆ ಸೆಳೆದ ಶಾಲೆ ಮತ್ತು ಮಕ್ಕಳ ಚಿತ್ರಣಕ್ಕೆ ವಂದೇ.
ಎಲ್ಲೋ ಓದಿದ ತರಂಗದ ನೆನಪಿನಿಂದ ಮಕ್ಕಳೆಲ್ಲ ಒಟ್ಟಾಗಿ ಕಾರಂತಜ್ಜನಿಗೆ ಪತ್ರ ಬರೆಯುವುದು, ಅವರ ಮಾರುತ್ತರದ ನಿರೀಕ್ಷೆ, ಅವರೊಬ್ಬರು ಜತೆಗಿದ್ದರೆ ಎಲ್ಲಾ ಗೆಲ್ಲಬಲ್ಲೆವೆಂಬ ನಂಬಿಕೆ, ಅವರದೇ ರೀತಿಯಲ್ಲಿ ಮಾಡುವ ಸಂಘಟನೆ, ಕಾರಂತಜ್ಜ ಹೇಳಿದ್ದೇ ಸರಿ ಅವರ ಮಾತಿಗೆ ಎದುರಿಲ್ಲವೆಂಬಂತೆ ಪ್ರತಿರೋಧವಿಲ್ಲದೇ ಮೌನವಾಗಿ ಊರು ಬಿಡುವುದು, ಎಲ್ಲ ಸಹಜವಾಗಿ ಮೂಡಿ ಬಂದಿದೆ. ಈ ಮಕ್ಕಳೆಲ್ಲ ಎಲ್ಲೋ ಒಂದು ಕಡೆ ಭವಿಷ್ಯದ ಬೆಳಕಿನಂತೆ ಕಾಣುವುದು ನಿಜ. ಪರಿಸರ ಸಂರಕ್ಷಣೆ, ಮನುಕುಲ ವಿನಾಶ ತಡೆಯ ನಿಟ್ಟಿನಲ್ಲಿ ಮಾಡಿದ ಈ ಸಿನೆಮಾ ತನ್ನ ಆಶಯವನ್ನು ಪೂರ್ತಿಯಾಗಲ್ಲದಿದ್ದರೂ ಸ್ವಲ್ಪ ಮಟ್ಟಿಗೆ ಪೂರೈಸುವಲ್ಲಿ ಯಶಸ್ವಿಯಾಗಿದೆ. ಹೈಸ್ಕೂಲು ಮಕ್ಕಳಿಗೆ ತೋರಿಸಿದರೆ ಇನ್ನೂ ಹೆಚ್ಚು ಪರಿಣಾಮಕಾರಿಯಾದೀತು. ಒಟ್ಟಾರೆಯಾಗಿ ನಾನು ಕೊಡಬಹುದಾದ್ದು ಅರವತ್ತು ಮಾರ್ಕು. ಚಿತ್ರದ ಕ್ಲೈಮಾಕ್ಸು ಎಂಬುದನ್ನು ಮೊದಲಿಗೇ ತೋರಿಸುವ ಬದಲು ಕೊನೆಯಲ್ಲಿ ತೋರಿಸಿದ್ದರೆ ಇನ್ನೊಂದೈದು ಜಾಸ್ತಿ ಕೊಡಬಹುದಿತ್ತೇನೋ…

ಇನ್ನುಳಿದ ಚಿತ್ರಗಳ ಬಗ್ಗೆ ನಿಧಾನವಾಗಿ ಬರೆಯುವೆ

(ಚಿತ್ರ ಗೌತಮನ ಅಪ್ಪಣೆಯಿಲ್ಲದೆ ಕದ್ದದ್ದು)

ಸಾಂಗತ್ಯದ ಸಂಗಾತದಲ್ಲಿ …

ಕಳೆದ ಎರಡು ದಿನಗಳ ಚಿಕ್ಕ ಝಲಕ್ …
ನನ್ನ ಕ್ಯಾಮರಾಗೆ ಸಣ್ಣ ಜ್ವರ ಬಂದ ಕಾರಣ ಅದು ಎಂದಿನಂತಿರಲಿಲ್ಲ…
ಎಲ್ಲಾ ಚಿತ್ರಗಳು ಸ್ಪಷ್ಟವಿಲ್ಲ; ಅದಕ್ಕಾಗಿ ಕೆಲವು ಚಿತ್ರಗಳನ್ನು ಮಾತ್ರ ಹಾಕಿರುವೆ. ಮನ್ನಿಸಬೇಕು..
ಜ್ವರ ವಾಸಿಯಾದ ನಂತರ ಮೊದಲಿನಂತೆ ಕ್ರಿಸ್ಟಲ್ ಕ್ಲಿಯರ್..

ಪರಮೇಶ್ವರ ಗುರುಸ್ವಾಮಿಯವರಿಂದ ಉದ್ಘಾಟನೆ

ಪರಮೇಶ್ವರ ಗುರುಸ್ವಾಮಿಯವರಿಂದ ಉದ್ಘಾಟನೆ


ಹೀಗಿದೆ ನೋಡಿ ನಮ್ಮ ತಂಡ

ಹೀಗಿದೆ ನೋಡಿ ನಮ್ಮ ತಂಡ


ನಿರ್ದೇಶಕರಾದ ಗುರುಪ್ರಸಾದ್  ಜತೆ ಚರ್ಚೆ

ನಿರ್ದೇಶಕರಾದ ಗುರುಪ್ರಸಾದ್ ಜತೆ ಚರ್ಚೆ


ಎಲ್ಲಾರೂ  ಇಷ್ಟು  ಶಿಸ್ತಾಗಿ  ಕೂತು  ಬರೀತಿರೋದೇನು  ?

ಎಲ್ಲಾರೂ ಇಷ್ಟು ಶಿಸ್ತಾಗಿ ಕೂತು ಬರೀತಿರೋದೇನು ?


ಏನಿದು  ಸೊಗಸು... ಎಷ್ಟೊಳ್ಳೆ  ಪೋಸು... (ದೀಪಾ, ಶಿಶಿರ್, ನಿರಂಜನ್, ಸದಾನಂದ್)

ಏನಿದು ಸೊಗಸು... ಎಷ್ಟೊಳ್ಳೆ ಪೋಸು... (ದೀಪಾ, ಶಿಶಿರ್, ನಿರಂಜನ್, ಸದಾನಂದ್)


ಗುರುಪ್ರಸಾದ್  ಮಾತಲ್ಲಿ ಕಳೆದು ಹೋದ ಕನಸುಗಾರರು.

ಗುರುಪ್ರಸಾದ್ ಮಾತಲ್ಲಿ ಕಳೆದು ಹೋದ ಕನಸುಗಾರರು.


ಪ್ರಮಾಣ ಪತ್ರ ವಿತರಣೆ

ಪ್ರಮಾಣ ಪತ್ರ ತೊಗೊಳಿ ಸುಧೀರ್


ಗುರುಪ್ರಸಾದ್ ಜತೆ ಉಭಯ ಕುಶಲೋಪರಿ

ಗುರುಪ್ರಸಾದ್ ಜತೆ ಉಭಯ ಕುಶಲೋಪರಿ


ವಿಶ್ವಮಾನವನ  ಜತೆ ಸಂದೇಶ  ಸಾರಿದ  ಕವಿ

ವಿಶ್ವಮಾನವನ ಜತೆ ಸಂದೇಶ ಸಾರಿದ ಕವಿ

ಕರಿಯಾ ಐ ಲವ್ ಯೂ…

.......

ಹನಿ ಹನಿ..

ಚಂದಿರ ಬಾರೋ...